
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸದ ಬೆನ್ನಲ್ಲೇ ಮತ್ತೆ ನಾಯಕತ್ವ ಬದಲಾವಣೆ ಮಾತುಗಳು ಕೇಳಿಬಂದಿದ್ದು, ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬದಲಾವಣೆ ಪ್ರೆಶ್ನೆಯೇ ಇಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಸಿಂಗ್, ಮುಖ್ಯಮಂತ್ರಿ ಬದಲಾವಣೆ ಕೇವಲ ಗುಮಾನಿ. ಈ ಚರ್ಚೆಯೇ ಕೇವಲ ಕಪೋಲಕಲ್ಪಿತ. ಸಿಎಂ ಬಸವರಾಜ್ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಜನರ ಬಯಕೆ ಕೂಡ ಅದೇ ಆಗಿದೆ ಎಂದರು.
ಪ್ರಧಾನಿ ಮೋದಿ ನಾಯಕತ್ವ, ಮಾರ್ಗದರ್ಶನದಲ್ಲಿ ಸಿಎಂ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸಿಎಂ ಬೊಮ್ಮಾಯಿ ಅವರು ಓರ್ವ ಕಾಮನ್ ಮ್ಯಾನ್. ಜನರ ಆಶಯಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುತ್ತಾ ಅಭಿವೃದ್ಧಿಗೆ ಪೂರಕ ಆಡಳಿತ ನೀಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಸಿಎಂ ಬದಲಾವಣೆ ಎಂಬುದು ಕೇವಲ ಊಹಾಪೋಹ. ಇಂತಹ ಕಾಲ್ಪನಿಕ ಪ್ರೆಶ್ನೆಗಳಿಗೆ ಉತ್ತರ ನೀಡಲಾಗುವುದಿಲ್ಲ ಎಂದು ಹೇಳಿದರು.
ಬಿಜೆಪಿ ನಾಯಕರ ಜತೆ ಅಮಿತ್ ಶಾ ಸಭೆಯಲ್ಲಿ ಬದಲಾವಣೆ