Latest

ಸಿಎಂ ಬೊಮ್ಮಾಯಿ ಜೆ.ಪಿ.ನಡ್ಡಾ ಭೇಟಿ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ದೆಹಲಿಗೆ ಸಿಎಂ ಬಸವರಾಜ್ ಬೊಮ್ಮಾಯಿ ತೆರಳಿದ್ದು, ಸಿಎಂ ಬೆನ್ನಲ್ಲೇ ಸಚಿವಾಕಾಂಕ್ಷಿಗಳು ದೆಹಲಿಗೆ ದೌಡಾಯಿಸಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಇಂದು ಸಚಿವ ಸಂಪುಟ ರಚನೆ ಫೈನಲ್ ಮಾಡಲಿದ್ದಾರೆ. ಈ ನಡುವೆ ಜೆ.ಪಿ.ನಡ್ಡಾ ಹಾಗೂ ಸಿಎಂ ಬೊಮ್ಮಾಯಿ ಭೇಟಿ ಮತ್ತಷ್ಟು ವಿಳಂಬವಾಗಿದೆ. ಮೊದಲು ಬೆಳಿಗ್ಗೆ 9 ಗಂಟೆಗೆ ಭೇಟಿಗೆ ಸಮಯ ನಿಗದಿಯಾಗಿತ್ತು. ನಂತರ 11 ಗಂಟೆಗೆ ಮುಂದೂಡಲಾಯಿತು. ಇದೀಗ ಸಂಜೆ ವೇಳೆಗೆ ಸಿಎಂ ಬೊಮ್ಮಾಯಿ, ನಡ್ಡಾ ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ನಡ್ಡಾ ಭೇಟಿ ಸಮಯ ಮುಂಡೂಡಿಕೆಯಾಗುತ್ತಿದ್ದಂತೆ ಸಚಿವಾಕಾಂಕ್ಷಿಗಳು ಸಿಎಂ ಬೊಮ್ಮಾಯಿ ಭೇಟಿಯಾಗಿ ಮಂತ್ರಿ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಶಾಸಕರಾದ ರಾಜುಗೌಡ, ಸತೀಶ್ ರೆಡ್ಡಿ, ಸಿ.ಸಿ.ಪಾಟೀಲ್, ಅರವಿಂದ್ ಬೆಲ್ಲದ್, ಲಕ್ಷ್ಮಣ ಸವದಿ ಸೇರಿದಂತೆ ಹಲವರು ಸಿಎಂ ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಿದ್ದಾರೆ.

ಈ ಮಧ್ಯೆ ಬೊಮ್ಮಾಯಿ ನಿನ್ನೆ ರಾತ್ರಿ ಸುಮಾರು 3 ಗಂಟೆಗಳಷ್ಟು ಸಮಯ ಅಜ್ಞಾತ ಸ್ಥಳಕ್ಕೆ ತೆರಳಿದ್ದರು ಎನ್ನಲಾಗಿದೆ. ನೂತನ ಸಚಿವಸಂಪುಟ ರಚನೆಗೆ ಹೈಕಮಾಂಡ್ ಇಂದೇ ಗ್ರೀನ್ ಸಿಗ್ನಲ್ ಕೊಡುವ ಸಾಧ್ಯತೆ ಇದೆ.

 

 

 

Related Articles

Back to top button