Politics

*ಮಹತ್ವದ ವಿದ್ಯಮಾನ: ರಾಜ್ಯಪಾಲರನ್ನು ದಿಢೀರ್ ಭೇಟಿಯಾದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರನ್ನು ದಿಢೀರ್ ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Home add -Advt

ಇಂದು ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಯಾಗಿ ಚರ್ಚೆ ನಡೆಸಿದ್ದಾರೆ.

ವಾಲ್ಮೀಕಿ ನಿಗಮದ ಹಗರಣ, ಮುಡಾ ಅಕ್ರಮದ ಬಗ್ಗೆ ತೀವ್ರ ಚರ್ಚೆ ನಡೆದಿರುವ ಬೆನ್ನಲ್ಲೇ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ, ರಾಜ್ಯಪಾಲರ ಭೇಟಿಯಾಗಿರುವುದು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ವಾಲ್ಮೀಕಿ ನಿಗಮದ ಹಗರಣ, ಮೂಡಿ ಅಕ್ರಮ, ತನಿಖೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರಸಕ್ತ ವಿದ್ಯಮಾನಗಳ ಬಗ್ಗೆ ರಾಜ್ಯಪಾಲರಿಗೆ ವರದಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

Related Articles

Back to top button