Uncategorized

*ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬೊಮ್ಮಾಯಿ ರಹಸ್ಯ ಸಭೆ; ಸಂಚಲನ ಸೃಷ್ಟಿಸಿದ ನಾಯಕರ ನಡೆ*

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ಹೊಂದಾಣಿಕೆ ರಾಜಕಾರಣ ನಡೆದಿದೆ ಎಂದು ಬಿಜೆಪಿ ನಾಯಕರೇ ಸ್ವಪಕ್ಷದ ವಿರುದ್ಧ ಆರೋಪ ಮಾಡುತ್ತಿರುವ ಸಂದರ್ಭದಲ್ಲೇ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ಹಿರಿಯ ನಯಕ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿಯಾಗಿ ರಹಸ್ಯ ಸಭೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

Home add -Advt

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ನಿನ್ನೆ ರಾತ್ರಿ ದಾವಣಗೆರೆಯ ಹೊರವಲಯದ ಖಾಸಗಿ ರೆಸಾರ್ಟ್ ನಲ್ಲಿ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿಯಾಗಿ ಸಭೆ ನಡೆಸಿದ್ದಾರೆ. ಸುಮಾರು 25 ನಿಮಿಷಗಳ ಕಾಲ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ನಾಯಕರ ಭೇಟಿ ವೈರಲ್ ಆಗಿದೆ.

ಹೊಂದಾಣಿಕೆ ರಾಜಕಾರಣದ ಚರ್ಚೆ ನಡೆದಿರುವಾಗಲೇ ಮಾಜಿ ಸಿಎಂ ಬೊಮ್ಮಾಯಿ ಹಾಗೂ ಶಾಮನೂರು ಸಿವಶಂಕರಪ್ಪ ಅವರ ಈ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

Related Articles

Back to top button