Kannada NewsLatest

*ಬೆಳಗಾವಿ ಏರ್ ಪೋರ್ಟ್ ನಲ್ಲಿ ಸಿಎಂ ಹಾಗೂ ವಿಪಕ್ಷನಾಯಕ ಮುಖಾಮುಖಿ; ಮುಖ್ಯಮಂತ್ರಿಗಳಿಗೆ ಬೆನ್ನು ತಟ್ಟಿ ಕಳುಹಿಸಿದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಇಂದು ಅಪರೂಪದ ವಿದ್ಯಮಾನ ನಡೆದಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಪರಸ್ಪರ ಮುಖಾಮುಖಿಯಾದ ಸಂದರ್ಭಕ್ಕೆ ಏರ್ ಪೋರ್ಟ್ ಸಾಕ್ಷಿಯಾಯಿತು.

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದು, ಈ ವೇಳೆ ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ ಅವರ ಭುಜದ ಮೇಲೆ ಗುದ್ದಿದ್ದಾರೆ.

ಬಳಿಕ ಇಬ್ಬರೂ ನಗು ನಗುತ್ತಲೇ ಮಾತನಾಡಿ, ಪರಸ್ಪರ ಉಭಯ ಕುಶಲೋಪರಿ ವಿಚಾರಿಸಿದರು. ಲಿಂಗಾಯಿತ ಸಮರದ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಪರಸ್ಪರ ಮುಖಾಮುಖಿ ಭೇಟಿಗೆ ಸಾಂಬ್ರಾ ವಿಮಾನ ನಿಲ್ದಾಣ ಸಾಕ್ಷಿಯಾಯಿತು.

https://pragati.taskdun.com/priyanka-gandhimysore-mailari-hoteldoseidli/

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button