Latest

ಮಹಿಳೆಯರು ಉತ್ಪಾದನೆಯಲ್ಲಿ ತೊಡಗಿದರೆ ಕುಟುಂಬದಲ್ಲಿ ಉಳಿತಾಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಗರಬತ್ತಿ ಉದ್ಯಮಕ್ಕೆ ರಾಜ್ಯ ಸರ್ಕಾರದಿಂದ ಎಲ್ಲ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.

ಅವರು ಇಂದು ಅಖಿಲ ಭಾರತ ಅಗರಬತ್ತಿ ಉತ್ಪಾದಕರ ಸಂಘದ ವತಿಯಿಂದ ಆಯೋಜಿಸಿದ್ದ ಐಮಾ ಎಕ್ಸ್ ಪೋ ( AIAMA )2022 ಉದ್ಘಾಟಿಸಿ ಮಾತನಾಡಿದರು. ಅಗರಬತ್ತಿ ಉದ್ಯಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರಿಗೆ ಉದ್ಯೋಗ ನೀಡುವುದರಿಂದ ಹೆಚ್ಚಿನ ಅನುಕೂಲವಾಗುತ್ತದೆ.
ಗ್ರಾಮೀಣ ಪ್ರದೇಶದಲ್ಲಿ ಈ ಉದ್ಯಮ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ರಾಜ್ಯ ಸರ್ಕಾರವು ಸಣ್ಣ ಪುಟ್ಟ ಸಮುದಾಯಗಳಾದ ಕುಂಬಾರ ಕಮ್ಮಾರ, ಚಮ್ಮಾರ ಸೇದಂತೆ ಇತರ ಸಮುದಾಯಗಳಿಗೆ ಸಾಲ ನೀಡುವ ಯೋಜನೆ ಜಾರಿಗೆ ತರಲಾಗುತ್ತಿದೆ. ಆರ್ಥಿಕತೆ ಕೆಳ ಸ್ಥರದಿಂದ ಬಲಗೊಳ್ಳುತ್ತದೆ ಎಂದು ನಂಬಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಪರಿಮಳದ ಜೊತೆಗೆ ಸಂತೋಷ ಹರಡುವ ಕೆಲಸ
ಅಗರಬತ್ತಿ ಉದ್ಯಮ ಪರಿಮಳದ ಜೊತೆಗೆ ಸಂತೋಷ ಹರಡುವ ಕೆಲಸ ಮಾಡುತ್ತಿದೆ. 250 ವರ್ಷಗಳಿಂದ ಪರಿಮಳದ ಜೊತೆಗೆ ಸಂತೋಷ ಹರಡುತ್ತಿದ್ದೀರಿ. ಯಾವುದೇ ಉದ್ಯಮ ಈ ರೀತಿ ಇಲ್ಲ. ಸಣ್ಣ ಸಣ್ಣ ಸಂತೋಷಗಳು ದೊಡ್ಡ ಸಂಭ್ರಮ ನೀಡುತ್ತಿವೆ. ಅಗರಬತ್ತಿ ಉದ್ಯಮಮಕ್ಕೆ ದೊಡ್ಡ ಇತಿಹಾಸವಿದೆ. ಇದೊಂದು ದೊಡ್ಡ ವಿಜ್ಞಾನ. ಪಶ್ಚಿಮಾತ್ಯ ದೇಶಗಳಲ್ಲಿ ಕೃತಕ ಪರಿಮಳ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.

Home add -Advt

ಭಾರತ ಜೀವ ವೈವಿಧ್ಯವಿರುವ ದೇಶ. ನಮ್ಮಲ್ಲಿ ಪ್ರಾಕೃತಿಕವಾಗಿಯೇ ಪರಿಮಳ ಬೀರುವ ಉತ್ಪನ್ನಗಳು ದೊರೆಯುತ್ತಿವೆ. ನನ್ನ ಕ್ಷೇತ್ರದಲ್ಲಿಯೂ ಒಬ್ಬರು ಸುಮಾರು 2000 ಎಕರೆ ಪ್ರದೇಶದಲ್ಲಿ ಪುಷ್ಪ ಕೃಷಿ ಮಾಡುತ್ತಿದ್ದಾರೆ ಎಂದರು.

ಮಹಿಳೆಯರಿಗೆ ಉದ್ಯೋಗಾವಕಾಶ
ನಮ್ಮ ಸರ್ಕಾರ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿಗೆ ತಂದಿದೆ. 5 ಲಕ್ಷದವರೆಗೆ ಅನುದಾನ ನೀಡಲಾಗುತ್ತಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೊಗ ಕಲ್ಪಿಸಲು ಅನುಕೂಲವಾಗುತ್ತದೆ. ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಉಳಿತಾಯ ಮಾಡುತ್ತಾರೆ. ಅವರು ಉತ್ಪಾದನೆಯಲ್ಲಿ ತೊಡಗಿದರೆ ಕುಟುಂಬದಲ್ಲಿ ಹೆಚ್ಚಿನ ಉಳಿತಾಯವಾಗಲಿದೆ.

ಮಹಿಳೆಯರು ಮನೆಯಲ್ಲಿಯೇ ಕುಳಿತು ಕೆಲಸ ಮಾಡಬಹುದು. ಹೆಚ್ಚಿನ ಜನರಿಂದ ಉತ್ಪಾದನೆಯಾಗಬೇಕು ಎಂದು ಮಹಾತ್ಮಾ ಗಾಂಧಿ ಹೇಳಿದ್ದರು ಎಂದರು.

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಮಾ ಅಧ್ಯಕ್ಷ ಅರ್ಜುನ್ ರಂಗಾ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣ; ಸ್ಫೋಟದ ಹೊಣೆಹೊತ್ತ ಉಗ್ರ ಸಂಘಟನೆ

https://pragati.taskdun.com/mangalore-blast-caseislamic-resistance-counciltemple-target/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button