Karnataka News

ಬೆಳಗಾವಿ ಚುನಾವಣೆ ಆಖಾಡಕ್ಕೆ ಸಿಎಂ ಬೊಮ್ಮಾಯಿ ಎಂಟ್ರಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ.

ಮಂಗಳವಾರ ಬೆಳಗಾವಿಗೆ ಆಗಮಿಸಲಿರುವ ಅವರು ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಪರ ಮತ ಯಾಚನೆ ಮಾಡಲಿದ್ದಾರೆ.

ಅಂದು ಮುಂಜಾನೆ 8.45ಕ್ಕೆ ವಿಮಾನದ ಮೂಲಕ ಆಗಮಿಸಲಿರುವ ಬೊಮ್ಮಾಯಿ, 9 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ನಗರದ ಖಾಸಗಿ ಹೊಟೆಲ್ ನಲ್ಲಿ ಪಂಚಾಯಿತಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.

ಚುನಾವಣೆಗೆ ಕೇವಲ 4 ದಿನಗಳಿದ್ದು, ಪ್ರಚಾರಕ್ಕೆ ಘಟಾನುಘಟಿಗಳು ಎಂಟ್ರಿ ಕೊಡುತ್ತಿದ್ದಾರೆ. ಕಾಂಗ್ರೆಸ್ ಪರ ಇಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಆಗಮಿಸಿದ್ದಾರೆ.

ಚುನಾವಣೆ ಸುದ್ದಿ, ಜಾಹಿರಾತು ಪ್ರಕಟಣೆ: ಮಾಧ್ಯಮಗಳಿಗೆ ಸೂಚನೆ

`ಕಾಮಸೂತ್ರ: ಇದ್ದದ್ದು ಇದ್ದ ಹಾಗೆ’ ಸೋಮವಾರ ಬಿಡುಗಡೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button