
ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಮಣಿಪುರ ಹಿಂಸಾಚಾರದ ತನಿಖೆಗಾಗಿ ನಿವೃತ್ತ ನ್ಯಾಯಾಧೀಶರ (ಹೈಕೋರ್ಟ್ನ ಮುಖ್ಯ ನ್ಯಾಯಾಧೀಶರ ಮಟ್ಟದ) ಅಧ್ಯಕ್ಷತೆಯಲ್ಲಿ ನ್ಯಾಯಾಂಗ ಆಯೋಗ ರಚಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಕುರಿತ ನಿರ್ಧಾರವನ್ನು ಗುರುವಾರ ಘೋಷಿಸಿದ್ದಾರೆ.
ಮಣಿಪುರ ರಾಜ್ಯಪಾಲರಾದ ಅನುಸೂಯಾ ಉಯ್ಕೆ ನೇತೃತ್ವದಲ್ಲಿ ಶಾಂತಿ ಸಮಿತಿಯನ್ನು ರಚಿಸಲಾಗುವುದು. ಆರು ಪ್ರಕರಣಗಳ ತನಿಖೆಯನ್ನು ಸಿಬಿಐ ನಡೆಸಲಿದೆ ಎಂದು ಶಾ ತಿಳಿಸಿದ್ದಾರೆ.
“ಅಧಿಕಾರಿಗಳು, ರಾಜಕೀಯ ಪಕ್ಷಗಳು, ಕುಕಿ ಮತ್ತು ಮೈಟಿ ನಾಗರಿಕ ಗುಂಪುಗಳ ಪ್ರತಿನಿಧಿಗಳು ಸೇರಿದಂತೆ ಸಮಾಜದ ಪ್ರತಿಯೊಂದು ವರ್ಗದವರೊಂದಿಗೆ ಹಲವಾರು ಸುತ್ತಿನ ಸಭೆಗಳನ್ನು ನಡೆಸಿದ್ದೇನೆ. ಹಿಂಸಾಚಾರದ ಕಾರಣಗಳನ್ನು ಪರಿಶೀಲಿಸಲು ಮತ್ತು ಅದಕ್ಕೆ ಕಾರಣರಾದವರನ್ನು ಗುರುತಿಸಲು ತನಿಖಾ ಸಮಿತಿಯನ್ನು ರಚಿಸಲಾಗುವುದು. ಈ ತನಿಖಾ ಸಮಿತಿಯು ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಶ್ರೇಣಿಯ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿದೆ. ಮಣಿಪುರ ರಾಜ್ಯಪಾಲರ ಮಾರ್ಗದರ್ಶನದಲ್ಲಿ ಶಾಂತಿ ಸಮಿತಿಯನ್ನು ರಚಿಸಲಾಗುವುದು” ಎಂದು ಅಮಿತ್ ಶಾ ಘೋಷಿಸಿದರು.
ಸಿಆರ್ಪಿಎಫ್ನ ನಿವೃತ್ತ ಡಿಜಿ ಕುಲದೀಪ್ ಸಿಂಗ್ನೇ ತೃತ್ವದಲ್ಲಿ ಗುರುವಾರದಿಂದ ಇಂಟರ್-ಏಜೆನ್ಸಿ ಏಕೀಕೃತ ಕಮಾಂಡ್ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತದೆ – ಪರಿಸ್ಥಿತಿಯನ್ನು ನಿರ್ವಹಿಸಲು ರಾಜ್ಯದಲ್ಲಿ ನಿಯೋಜಿಸಲಾದ ಏಜೆನ್ಸಿಗಳ ನಡುವಿನ ಸಮನ್ವಯವನ್ನು ಮೇಲ್ವಿಚಾರಣೆ ಮಾಡುತ್ತದೆ ಎಂದು ಅಮಿತ್ ಶಾ ಹೇಳಿದರು.
https://pragati.taskdun.com/21-thousand-government-employees-have-bpl-card/
https://pragati.taskdun.com/teacher-transfer-process-in-next-two-days/
https://pragati.taskdun.com/21-thousand-government-employees-have-bpl-card/