
ಪ್ರಗತಿವಾಹಿನಿ ಸುದ್ದಿ : ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಕೈ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ
ಬೆಂಗಳೂರಲ್ಲಿ ಮಾತಾಡಿದ ಅವರು, ಚಿನ್ನಸ್ವಾಮಿ ಪ್ರಕರಣದ ನೇರ ಜವಾಬ್ದಾರಿ ಸಿಎಂ, ಡಿಸಿಎಂ, ಗೃಹ ಸಚಿವರು ಹೊರಬೇಕು. ನೈತಿಕತೆ ಇದ್ದರೆ ಸಿಎಂ, ಡಿಸಿಎಂ,ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ವಿಧಾನಸೌಧದ ಮುಂದೆ ಕಾರ್ಯಕ್ರಮ ಮಾಡಲು ಪೊಲೀಸ್ ಕಮೀಷನರ್ ಮೇಲೆ ಒತ್ತಡ ಹಾಕಲಾಗಿತ್ತು. ಕಮಿಷನರ್ ಮೇಲೆ ಒತ್ತಡ ಹಾಕಿದ್ದು ಯಾರು ಅಂತ ಸರ್ಕಾರ ಹೇಳಬೇಕು. ಕಮಿಷನರ್ ಸೇರಿ ಪೊಲೀಸರ ಮೇಲೆ ಸರ್ಕಾರ ತೆಗೆದುಕೊಂಡ ಅಮಾನತಿನ ಕ್ರಮ ಸರಿಯಲ್ಲ ಎಂದು ಒತ್ತಾಯ ಮಾಡಿದರು.
ಸಿಎಂ ಕಾರ್ಯದರ್ಶಿ ಗೋವಿಂದರಾಜು ಅಮಾನತು ವಿಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ ಕೊಟ್ಟರು. ನಾನು ಹೇಳಿದ ಮೇಲೆ ಜ್ಞಾನೋದಯ ಆಗಿದ್ದಕ್ಕೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸ್ತೇನೆ. ಪೊಲೀಸ್ ಇಲಾಖೆ ಅಧಿಕಾರಿಗಳಿಂದ ತಪ್ಪಾಗಿದೆ ಅಂತಾ 5 ಜನ ಅಧಿಕಾರಿಗಳ ಸಸ್ಪೆಂಡ್ ಮಾಡೋದು ಅವಶ್ಯಕತೆ ಇರಲಿಲ್ಲ.ಸರ್ಕಾರ ಮಾಡಿರುವ ತಪ್ಪಿಗೆ ಅಧಿಕಾರಿಗಳ ತಲೆದಂಡ ಆಗಿದೆ ಎಂದರು.