Kannada NewsKarnataka NewsNationalPolitics

*ಸಿಎಂ ಭೇಟಿಯಾದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ*

ಪ್ರಗತಿವಾಹಿನಿ ಸುದ್ದಿ: ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ನಿಯೋಗ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಚರ್ಚಿಸಿದರು. 

ಎಲ್ಲಾ ದಲಿತ ಮತ್ತು ಹಿಂದುಳಿದ ಮಠಗಳಿಗೆ ಅನುದಾನ ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

Home add -Advt

ಹಿಂದುಳಿದ ಮತ್ತು ದಲಿತ ಅರ್ಚಕರನ್ನು ರೂಪಿಸಲು ಅನುಕೂಲ ಆಗುವ ರೀತಿ ಗುರುಕುಲ ಆರಂಭಿಸಲು ಚಿತ್ರದುರ್ಗ ಜಿಲ್ಲೆಯಲ್ಲಿ ಜಾಗ ನೀಡುವಂತೆ ನಿಯೋಗ ಮನವಿ ಮಾಡಿತು. 

ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಗ ಗುರುತಿಸಿ ವರದಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ಹಿಂದುಳಿದ ಮತ್ತು ದಲಿತ ಮಠಗಳಿಗೆ ಬೆಂಗಳೂರಿನಲ್ಲಿ ನಿವೇಶನ ಒದಗಿಸುವಂತೆ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಪರಿಶೀಲನೆ ಮಾಡುವ ಭರವಸೆ ನೀಡಿದರು.

Related Articles

Back to top button