ಸಂಜೆ ಮಹತ್ವದ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ವಿಧಾನಸಭೆಯ ಮೂರು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ, ಜಾತಿ ಗಣತಿ, ಮೀಸಲಾತಿ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರ ಸಭೆ ಕರೆದಿದ್ದಾರೆ. ಭಾನುವಾರ ಸಂಜೆ ಆರು ಗಂಟೆಗೆ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಯಲಿದೆ. ರಾಜ್ಯದ 3 ವಿಧಾನ ಸಭೆ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗೆ ಆಡಳಿತ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಹಾಗಾಗಿ ಇಡೀ ಮಂತ್ರಿಮಂಡಳ ಮತ್ತು ಶಾಸಕರು ಒಗ್ಗಟ್ಟಾಗಿ, ಬದ್ದತೆಯಿಂದ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ … Continue reading ಸಂಜೆ ಮಹತ್ವದ ಸಭೆ ಕರೆದ ಸಿಎಂ ಸಿದ್ದರಾಮಯ್ಯ