Latest

*ಹಬ್ಬದ ದಿನವೇ ಘೋರ ದುರಂತ; ಪುಣ್ಯಸ್ನಾನಕ್ಕೆ ನದಿಗಿಳಿದ ವ್ಯಕ್ತಿ ಸಾವು*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಎಲ್ಲೆಲ್ಲೂ ಯುಗಾದಿ ಹಬ್ಬದ ಸಡಗರ ಸಂಭ್ರಮ. ಈ ಸಡಗರದ ನಡುವೆ ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮದಲ್ಲಿ ಇಳಿದ ವ್ಯಕ್ತಿಯೋರ್ವರು ದುರಂತಕ್ಕೀಡಾಗಿದ್ದಾರೆ.

Home add -Advt

ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಯುಗಾದಿ ಹಿನ್ನೆಲೆಯಲ್ಲಿ ಪುಣ್ಯಸ್ನಾನಕ್ಕೆ ಎಂದು ನದಿಗಿಳಿದ ಎಸ್ ಬಿಐ ನೌಕರ ಗಂಗಾಧರ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಗಂಗಾಧರ್ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ನಿವಾಸಿ. ಹಬ್ಬದ ಹಿನ್ನೆಲೆಯಲ್ಲಿ ಸಾವಿರಾರು ಜನರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನಕ್ಕೆಂದು ಆಗಮಿಸಿದ್ದು, ಅದರಂತೆ ಗಂಗಾಧರ್ ಕೂಡ ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮದಲ್ಲಿ ನೀರಿಗಿಳಿದಿದ್ದಾರೆ. ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ.

Related Articles

Back to top button