Kannada NewsKarnataka NewsLatest

*ಶೀತಗಾಳಿ ಎಚ್ಚರಿಕೆ: 9 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ*

ವಿಜಯಪುರದಲ್ಲಿ ಹತ್ತು ವರ್ಷಗಳಲ್ಲೇ ಅತ್ಯಂತ ಕಡಿಮೆ ತಾಪಮಾನ ದಾಖಲು


ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮೈ ಕೊರೆವ ಚಳಿಗೆ ಜನರು ತತ್ತರಿಸುತ್ತಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟ ಮಂಜು ಹಾಗೂ ಚಳಿ ಅಬ್ಬರ ಜೋರಾಗಿದ್ದು, ಶೀತಗಾಳಿಯಿಂದಾಗಿ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ.

Home add -Advt

ರಾಜ್ಯದ ಬಹುತೇಕ ಜಿಲೆಗಳಲ್ಲಿ ಭಾರಿ ಚಳಿ ಹೆಚ್ಚುತ್ತಿದ್ದು, ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಉತ್ತರ ಕರ್ನಾಅಟಕ ಭಾಗದಲ್ಲಿ ಶೀತಗಾಳಿ ಆರಂಭವಾಗಿದ್ದು, ಇನ್ನೆರಡು ದಿನಗಳಲ್ಲಿ ಶೀತಗಾಳಿ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶೀತಗಾಳಿ ಹಿನ್ನೆಲೆಯಲ್ಲಿ 9 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಶೀತಗಾಳಿ ಬೀಸಲಿದ್ದು ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಈ ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತವಾಗಿದೆ. ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಅತಿ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರದಲ್ಲಿ 7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಳೆದ ಹತ್ತು ವರ್ಷಗಳಲ್ಲೇ ಇದು ಅತ್ಯಂತ ಕಡಿಮೆ ತಾಪಮಾನವಾಗಿದೆ. ಇನ್ನೆರಡು ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯಲಿದ್ದು 9 ಡಿಗ್ರಿ ಸೆಲ್ಸಿಯಸ್ ಗೆ ಕುಸಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ.

Related Articles

Back to top button