Kannada NewsKarnataka News

ಕಾಂಗ್ರೆಸ್ 6 ಅಭ್ಯರ್ಥಿಗಳ ಪಟ್ಟಿ ಪ್ರಕಟ

ಪ್ರಗತಿವಾಹಿನಿ ಸುದ್ದಿ, ನವದೆಹಲಿ -ಡಿಸೆಂಬರ್ 5ರಂದು ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 6 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ.

ಗೋಕಾಕದಿಂದ ಲಖನ್ ಜಾರಕಿಹೊಳಿ, ಕಾಗವಾಡದಿಂದ ರಾಜು ಕಾಗೆ ಹಾಗೂ ಅಥಣಿಯಿಂದ ಗಜಾನನ ಮಂಗಸೂಳಿಗೆ ಟಿಕೆಟ್ ಘೋಷಿಸಲಾಗಿದೆ.

ವಿಜಯ ನಗರದಿಂದ ವೆಂಕಟರಾವ್ ಘೋರ್ಪಡೆ, ಶಿವಾಜಿ ನಗರದಿಂದ ರಿಜ್ವಾನ್ ಅರ್ಷದ್. ಕೃಷ್ಣರಾಜ ಪೇಟೆಯಿಂದ ಕೆ.ಬಿ.ಚಂದ್ರಶೇಖರ್ ಕಣಕ್ಕಿಳಿಯಲಿದ್ದಾರೆ.

ಕಾಗವಾಡದಿಂದ ಪ್ರಕಾಶ ಹುಕ್ಕೇರಿ ಕಣಕ್ಕಿಳಿಸಿ ಅಥಣಿಯಲ್ಲಿ ರಾಜು ಕಾಗೆಗೆ ಟಿಕೆಟ್ ನೀಡುತ್ತಾರೆ ಎಂದು ಹೇಳಲಾಗಿತ್ತು. ಆದರೆ ಅಥಣಿಗೆ ಗಜಾನನ ಮಂಗಸೂಳಿಗೆ ಟಿಕೆಟ್ ನೀಡಲಾಗಿದೆ.

Home add -Advt

ಅಥಣಿಯಿಂದ ಪಕ್ಷೇತರರಾಗಿ ಕಣಕ್ಕಿಳಿಯಲು ಕಾಂಗ್ರೆಸ್ ಮಾಜಿ ಶಾಸಕ ಶಹಜಹಾನ್ ಡೊಂಗರಾಗಾವ್ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಯಾವುದೇ ಕಾರಣದಿಂದ ತಾವು ಕಣದಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಹಾಗಾಗಿ ಕಾಂಗ್ರೆಸ್ ಅಥಣಿಯಲ್ಲಿ ಪ್ರಭಲ ಬಂಡಾಯ ಎದುರಿಸುವಂತಾಗಿದೆ.

ಗೋಕಾಕ ರಾಜಕೀಯ ಇನ್ನಷ್ಟು ಕುತೂಹಲ: ತ್ರಿಕೋನ ಸ್ಪರ್ಧೆ ಫಿಕ್ಸ್?

ಲಕ್ಷ್ಮಿ ಹೆಬ್ಬಾಳಕರ್ ಗೆ ಯಾವ ಸ್ಥಾನವನ್ನೂ ಕೊಡಬಾರದೆಂದು ಕಂಡೀಷನ್ ಹಾಕಿದ್ದೆ -ರಮೇಶ್ ಜಾರಕಿಹೊಳಿ

Related Articles

Back to top button