Belagavi NewsBelgaum NewsKannada NewsKarnataka News

ಬೆಟ್ಟಿಂಗ್ ಭರಾಟೆ: ಚಪ್ಪಲಿಯಿಂದ ಹೊಡೆದಾಡಿಕೊಂಡ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಮತದಾನ ರಾಜ್ಯದಲ್ಲಿ ಮುಗಿದಿದೆ. ಜೂನ್ 4 ರಂದು ಫಲಿತಾಂಶ ಬರಲಿದೆ‌. ಇದರ ಮಧ್ಯೆ ಅಭ್ಯರ್ಥಿಗಳ ಗೆಲುವಿಗಾಗಿ ಬೆಟ್ಟಿಂಗ್ ಭರಾಟೆ ಜೊರಾಗಿದೆ‌.‌ ಹೀಗೆ ಬೆಟ್ಟಿಂಗ್ ಕಟ್ಟಿದ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ.‌

ಲೋಕಸಭೆ ಚುನಾವಣೆಯ ಅಭ್ಯರ್ಥಿಗಳ ಗೆಲುವಿಗಾಗಿ ಕಾರ್ಯಕರ್ತರು ಭರ್ಜರಿ ಬೆಟ್ಟಿಂಗ್ ಆಡುವಾಗ ಗಲಾಟೆ ಮಾಡಿಕೊಂಡಿದ್ದಾರೆ.‌ ಗಲಾಟೆ ಜೋರಾಗಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರು ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ.‌ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಕೆ.ಸಿ. ರಸ್ತೆಯಲ್ಲಿ ಈ ಗಲಾಟೆ ನಡೆದಿದೆ.‌ ಎಣ್ಣೆ ಏಟಲ್ಲಿ ನಡು ರಸ್ತೆಯಲ್ಲೆ ಚಪ್ಪಲ್ಲಿಯಿಂದ ಹೊಡೆದಾಡಿಕೊಂಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button