Kannada NewsKarnataka NewsNationalPolitics

*69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ; ನ.1ರಂದು ನಡೆಯಲಿರುವ 69ನೇ ಕನ್ನಡ ರಾಜ್ಯೋತ್ಸವ ಶುಭ ಸಂದರ್ಭ ಹಿನ್ನೆಲೆ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ.

ಈ ಕುರಿತು ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್‌ ಎಸ್‌. ತಂಗಡಗಿ ಅವರು, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1,575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರ ಆಯ್ಕೆ ಮಾಡಲಾಗಿದೆ. ಪ್ರತಿ ಜಿಲ್ಲೆಗೂ ಪ್ರಾತಿನಿದ್ಯ ನೀಡಲಾಗಿದೆ ಎಂದರು.

Home add -Advt

ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69 + 100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವಿವರಿಸಿದರು.

ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ, ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ, ಪ್ರಶಸ್ತಿ ನೀಡಲಾಗುತ್ತಿದೆ.

ವಿವಿರಕ್ಕಾಗಿ ಕ್ಲಿಕ್ ಮಾಡಿ –

https://mail.google.com/mail/u/0?ui=2&ik=8ea932610f&attid=0.1&permmsgid=msg-a:r7586751693964113458&th=192dd46e0a90b077&view=att&disp=inline&realattid=192dd464028f3cef4151

Related Articles

Back to top button