Kannada NewsKarnataka News

ಕಾಂಗ್ರೆಸ್ ಜಂಟಿ ಬಸ್ ಯಾತ್ರೆ ಬೆಳಗಾವಿಯಿಂದ: ದಿನಾಂಕವೂ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮತ್ತು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಂಟಿ ಬಸ್ ಯಾತ್ರೆಗೆ ಸ್ಥಳ ಮತ್ತು ದಿನಾಂಕ ಎರಡೂ ನಿರ್ಧಾರವಾಗಿದೆ.

ಬೆಳಗಾವಿಯಿಂದ ಜನೆವರಿ 12ರಿಂದ ಬಸ್ ಯಾತ್ರೆ ಆರಂಭವಾಗಲಿದೆ. ಈ ಯಾತ್ರೆ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದು, 2023ರ ವಿಧಾನಸಭೆ ಚುನಾವಣೆಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ಉದ್ದೇಶದ್ದಾಗಿದೆ.

ಸೋಮವಾರ ಸಂಜೆ ಬೆಳಗಾವಿಯಲ್ಲಿ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಈ ಕುರಿತು ಅಧಿಕೃತ ಘೋಷಣೆಯಾಗಲಿದೆ. ಟಿಳಕವಾಡಿಯ ಲೇಲೆ ಮೈದಾನದಿಂದ ಯಾತ್ರೆ ಆರಂಭಿಸುವ ಕುರಿತು ಚರ್ಚಿ ನಡೆದಿದೆ.

ಪಕ್ಷದ ವರಿಷ್ಠರ ಆದೇಶದಂತೆ ಡಿ.ಕೆ.ಶಿವಕುಮಾರ ಹಾಗೂ ಸಿದ್ದರಾಮಯ್ಯ ಜಂಟಿಯಾಗಿ ಯಾತ್ರೆ ನಡೆಸಲಿದ್ದಾರೆ.

ವಿಧಾನಸಭೆ, ವಿಧಾನ ಪರಿಷತ್ ಕಲಾಪ ಮುಂದೂಡಿಕೆ

https://pragati.taskdun.com/belagavi-winter-sessionvidhanasabhesuvarna-vidhanasoudha/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button