Karnataka NewsLatest

*ಕಾಂಗ್ರೆಸ್ ಮುಖಂಡನ ಹತ್ಯೆ ಕೇಸ್: ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಮುಖಂಡ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಂಜೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Home add -Advt

ಶ್ರೀನಿವಾಸ್ ಬಂಧಿತ ಆರೋಪಿ. ಆರೋಪಿ ಕಾಲಿಗೆ ಕಾಲಿಗೆ ಗುಂಡೆಟು ಹೊಡೆದು ಬಂಧಿಸಲಾಗಿದೆ.

ಕಾಂಗ್ರೆಸ್ ಮುಖಂಡ ನಂಜೇಶ್ ಅವರನ್ನು ಸಾತನೂರು ಆರ್.ಕೆ.ಡಾಬಾ ಬಳಿ ಶ್ರೀನಿವಾಸ್ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದು ಪರಾರಿಯಾಗಿದ್ದ. ಬಳಿಕ ಗಬ್ಬಾಡಿ ಎಂಬಲ್ಲಿ ತಲೆಮರೆಸಿಕೊಂಡಿದ್ದ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಇನ್ಸ್ ಪೆಕ್ಟರ್ ಅನಂತರಾಜು ತಂಡ ಇಂದು ಬೆಳಿಗ್ಗೆ ಗಬ್ಬವಾಡಿ ಬಳಿ ತೆರಳಿ ಆರೋಪಿ ಶ್ರೀನಿವಾಸ್ ನನ್ನು ಬಂಧಿಸಲು ಮುಂದಾಗಿದೆ. ಈ ವೇಳೆ ಆರೋಪಿ ಶ್ರೀನಿವಾಸ್ ಕಾನ್ಸ್ಟೇಬಲ್ ರಮೇಶ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಎಚ್ಚರಿಕೆ ನೀಡಿದರೂ ತಪ್ಪಿಸಿಕೊಳ್ಳಲು ಮುಂದಾದ ವೇಳೆ ಇನ್ಸ್ ಪೆಕ್ಟರ್ ಅನಂತರಾಜು ಆರೋಪಿ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ.

Related Articles

Back to top button