Belagavi NewsBelgaum NewsKannada NewsKarnataka News

ಬೆಳಗಾವಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರ ಪ್ರೋಟೆಸ್ಟ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಳೆ ರಾಜ್ಯಕ್ಕೆ ಮೋದಿ ಆಗಮನದ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು  ಪ್ರೋಟೆಸ್ಟ್ ಮಾಡಿದ್ದಾರೆ. 

ಶನಿವಾರ ಸಂಜೆ ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ನೇತೃತ್ವದಲ್ಲಿ ಚೆನ್ನಮ್ಮ ವೃತ್ತದ ಬಳಿ ಪ್ರತಿಭಟನೆ ನಡೆಯಿತು. ಬರ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಮೋದಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.‌

Home add -Advt

ಕೇಂದ್ರ ಬಿಜೆಪಿ ಸರಕಾರಕ್ಕೆ 22 ಪ್ರಶ್ನೆಗಳಿಗೆ ಕೇಳಿ, ಉತ್ತರಿಸುವಂತೆ ಆಗ್ರಹಿಸಿರುವ ಕಾಂಗ್ರೆಸ್ ಕಾರ್ಯಕರ್ತರು. 17,901 ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯದ 223 ತಾಲೂಕುಗಳು ಬರಪೀಡಿತವಾಗಿದ್ದು 33,770 ಕೋಟಿ ನಷ್ಟವಾಗಿದೆ. ಆದರೂ ಪರಿಹಾರ ನೀಡಿಲ್ಲಾ ಎಂದು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಅಕ್ರೋಶ ಹೊರ ಹಾಕಿದ್ದಾರೆ.

Related Articles

Back to top button