Latest

ನಾವು ಶಾಲೆ ಕಟ್ಟಿಸಿ, ವಯಸ್ಕರ ಶಿಕ್ಷಣ ಜಾರಿ ಮಾಡಿದರೂ ಮೋದಿ ಓದಲಿಲ್ಲ; ‘ಹೆಬ್ಬಟ್ಟ್ ಗಿರಾಕಿ ಮೋದಿ’ ಎಂದು ತಿರುಗೇಟು ನೀಡಿದ ಕಾಂಗ್ರೆಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿ, ‘ಹೆಬ್ಬಟ್ಟು ಗಿರಾಕಿ’ ಎಂದಿದ್ದ ಬಿಜೆಪಿ ಟ್ವೀಟಾಸ್ತ್ರಕ್ಕೆ ತಿರುಗೇಟು ನೀಡಿರುವ ರಾಜ್ಯ ಕಾಂಗ್ರೆಸ್ ಪ್ರಧಾನಿ ಮೋದಿ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದು, ಹೆಬ್ಬಟ್ ಗಿರಾಕಿ ಮೋದಿಯಿಂದ ದೇಶದ ಜನರು ನರಳುವಂತಾಗಿದೆ ಎಂದು ಕಿಡಿಕಾರಿದೆ.

ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಇಂದು ಪೆಟ್ರೋಲ್ 66, ಡೀಸೆಲ್ 55 ರೂಪಾಯಿಗೆ ದೊರಕುತ್ತಿತ್ತು. ಜನರನ್ನು ದೋಚಿ, ಉದ್ಯಮಿಗಳ ಹೊಟ್ಟೆ ತುಂಬಿಸುವ ಯೋಜನೆ ಹೊಂದಿರುವ ಕೇಂದ್ರ ಬಿಜೆಪಿ ಸರ್ಕಾರದ ತೆರಿಗೆ ಭಯೋತ್ಪಾದನೆಯಿಂದ ಎಲ್ಲಾ ಅಗತ್ಯ ವಸ್ತುಗಳು ದುಬಾರಿಯಾಗಿವೆ. ಜನರ ಕಷ್ಟಗಳನ್ನು ತಿಳಿಯದ ಹೆಬ್ಬಟ್ ಗಿರಾಕಿ ಮೋದಿಯಿಂದ ದೇಶ ನಲುಗಿ ಹೋಗುತ್ತಿದೆ ಎಂದು ಸರಣಿ ಟ್ವೀಟ್ ಮೂಲಕ ವಾಗ್ದಾಳಿ ಮುಂದುವರೆಸಿದೆ.

ದೇಶದ ವಾಸ್ತವದ ಬಗ್ಗೆ ಮಾತನಾಡದ ಪ್ರಧಾನಿ ಮೋದಿ ಮೌನೇಂದ್ರ ಮೋದಿ ಎಂದು ಹೆಸರು ಬದಲಿಸಿಕೊಳ್ಳಲಿ. ಬೆಲೆ ಏರಿಕೆ ಬಗ್ಗೆ-ಮೌನ, ಕಾಶ್ಮೀರದ ದಳ್ಳುರಿ ಬಗ್ಗೆ ಕೇಳಿದರೆ-ಮೌನ, ಚೀನಾ ಅತಿಕ್ರಮಣಕ್ಕೆ-ಮೌನ, ರೈತರ ಹತ್ಯೆಗೆ – ಮೌನ, ಅದಾನಿ ಡ್ರಗ್ಸ್ ದಂಧೆಯ ಬಗ್ಗೆ ಕೇಳಿದರೆ-ಮೌನ, ನಿರುದ್ಯೋಗದ ಬಗ್ಗೆಯೂ ಮೌನ, ಪತ್ರಿಕಾಗೋಷ್ಠಿಗೆ ಮೌನ ಹೀಗಾಗಿ ನರೇಂದ್ರ ಮೋದಿ ತಮ್ಮ ಹೆಸರು ಬದಲಿಸಿಕೊಳ್ಳಲಿ ಎಂದು ಹೇಳಿದೆ.

ಕಾಂಗ್ರೆಸ್ ಶಾಲೆಗಳನ್ನು ಕಟ್ಟಿಸಿತ್ತು, ಆದರೂ ನರೇಂದ್ರ ಮೋದಿ ಓದಿಲ್ಲ, ವಯಸ್ಕರ ಶಿಕ್ಷಣ ಯೋಜನೆಯನ್ನೂ ಜಾರಿಗೆ ತಂದಿತ್ತು, ಆದರೂ ಓದಿಲ್ಲ. ಭಿಕ್ಷಾಟನೆ ನಿಷೇಧವಿದ್ದರೂ ಭಿಕ್ಷೆ ಬೇಡುವ ಸೋಂಬೇರಿ ಜೀವನದ ಗೀಳಿಗೆ ಬಿದ್ದವರು ಇಂದು ದೇಶವಾಸಿಗಳನ್ನು ಭಿಕ್ಷುಕರನ್ನಾಗಿಸಿದ್ದಾರೆ. ’ಹೆಬ್ಬಟ್ಟು ಗಿರಾಕಿ ಮೋದಿ’ಯಿಂದ ದೇಶದ ಜನ ನರಳುತ್ತಿದ್ದಾರೆ ಎಂದು ತಿರುಗೇಟು ನೀಡಿದೆ.

ಡಿ.ಕೆ.ಶಿವಕುಮಾರ್ ವಿರುದ್ಧ ಎಸಿಬಿಗೆ ದೂರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button