
ಪ್ರಗತಿವಾಹಿನಿ ಸುದ್ದಿ: ಮನರೇಗಾ ಹೆಸರು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆ, ರಾಜಭವನ ಚಲೋ ತೀವ್ರಗೊಂಡಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಸಚಿವರು, ಶಾಸಕರು ಭಾಗವಹಿಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮನರೇಗಾ ಯೋಜನೆಯನ್ನು ವಿಬಿಜಿ ರಾಮ್ ಜಿ ಎಂದು ಹೆಸರು ಬದಲಿಸಿ ತಿದ್ದುಪಡಿ ಮಾಡಿರುವುದಕ್ಕೆ ತೀವ್ರ ಖಂಡನೆ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರು, ಮನರೇಗಾ ಹೆಸರು ಮರು ಸ್ಥಾಪನೆ ಮಾಡುವಂತೆ ಆಗ್ರಹಿಸಿದರು.

ಫ್ರೀಡಂ ಪಾರ್ಕ್ ನಿಂದ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಆರಂಭಿಸಿದ್ದು, ಬಸ್ ಮೂಲಕ ರಾಜಭವನದತ್ತ ತೆರಳಿದ್ದು, ಪ್ರತಿಭಟನೆ ತೀವ್ರ ಸ್ವರೂಪಪಡೆದಿದೆ.


