Karnataka News

*ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ; ಬಿಜೆಪಿ ಕಾರ್ಯಕರ್ತರು ಪೊಲಿಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

Home add -Advt

ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿರುವ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಹೊಣೆ ಹೊತ್ತು ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ, ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಈ ವೇಳೆ ಅಶೋಕಾ ಹೋಟೆಲ್ ಬಳಿ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ತಡೆದಿದ್ದಾರೆ. ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ಹಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Related Articles

Back to top button