Kannada NewsKarnataka NewsLatest

ಬಿಜೆಪಿ ಸೇವಾ ಕಾರ್ಯ ಚಟುವಟಿಕೆಗಳ ಬಗ್ಗೆ ಸಮಾಲೋಚನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೇಂದ್ರ ರೇಲ್ವೆ ರಾಜ್ಯ ಸಚಿವ ಸುರೇಶ ಅಂಗಡಿ ನೇತೃತ್ವದಲ್ಲಿ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲೆ ಹಾಗೂ ಮಹಾನಗರ ಜಿಲ್ಲೆಗಳಲ್ಲಿ ಕೋವಿಡ್ ೧೯ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಪಕ್ಷದಿಂದ ನಡೆದ ಸೇವಾ ಕಾರ್ಯ ಚಟುವಟಿಕೆಗಳ ಬಗ್ಗೆ  ಸಮಾಲೋಚನೆ ನಡೆಯಿತು.
 ಬರುವ ದಿನಗಳಲ್ಲಿ ಜನರಲ್ಲಿ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯವಹರಿಸಲು ಜಾಗೃತಿ ಮೂಡಿಸಿ ಜನರು ಹಾಗೂ ಸರ್ಕಾರದ ಮಧ್ಯೆ ಕೊಂಡಿಯಾಗಿ ಸೇವಾ ಕಾರ್ಯ ಮಾಡಬೇಕೆಂದು ಕರೆ ನೀಡಿದರು.
ವಿಭಾಗ ಪ್ರಭಾರಿ ಈರಣ್ಣಾ ಕಡಾಡಿ ವಿಶೇಷವಾಗಿ ರೈತರ ಬೆಳೆಯ ಬೆಂಬಲ ಬೆಲೆ ಕುರಿತು ಮಾತನಾಡಿದರು.
 ಗ್ರಾಮೀಣ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಅಸಂಘಟಿತ ಕಾರ್ಮಿಕರ ಬಗ್ಗೆ ಹಾಗೂ ಹಿರೇಬಾಗೇವಾಡಿಯ ಸದ್ಯದ ಪರಿಸ್ಥಿತಿ ಬಗ್ಗೆ ಚರ್ಚಿಸಿದರು.
ಮಹಾನಗರ ಅಧ್ಯಕ್ಷ ಶಶಿಕಾಂತ ಪಾಟೀಲ, ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಚಿಕ್ಕನಗೌಡರ ಪಕ್ಷದ ಸೇವಾ ಕಾರ್ಯಗಳ  ಸಮಗ್ರ ವರದಿ ನೀಡಿದರು. ವಿಭಾಗ ಸಂಘಟನಾ ಕಾರ್ಯದರ್ಶಿ ರವಿ ಹೀರೆಮಠ ಮುಂದಿನ ಸೇವಾ ಕಾರ್ಯಗಳ ಬಗ್ಗೆ ಸೂಚಿಸಿದರು.
ಮಹೇಶ ಮೋಹಿತೆ, ಸುಭಾಷ್ ಪಾಟೀಲ, ಮುರುಘೇಂದ್ರ ಪಾಟೀಲ, ಗಿರೀಶ್ ದೊಂಗಡಿ, ದಾದಾಗೌಡ ಬಿರಾದಾರ ಇತರು ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button