Belagavi NewsBelgaum NewsKarnataka News

*ಬೆಳಗಾವಿ: ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೀಡಾಗುತ್ತಿರುವ ಪ್ರಕರಣ ಹೆಚ್ಚುತ್ತಿದೆ. ಇದೀಗ ಬೆಳಗಾವಿಯಲ್ಲಿ ಇಂತದ್ದೊಂದು ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಸನಾಳ ಗ್ರಾಮದಲ್ಲಿ ನಡೆದಿದೆ.

ಕಸನಾಳ ಗ್ರಾಮದಲ್ಲಿ 30ಕ್ಕೂ ಹೆಚ್ಚು ಜನರು ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ. ತೀವ್ರ ಸ್ವಸ್ಥರಾಗಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Home add -Advt


Related Articles

Back to top button