Kannada NewsKarnataka NewsLatestUncategorized

*ಕಲುಷಿತಗೊಂಡ ಕುಡಿಯುವ ನೀರು; 54 ಜನರು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಕಲುಷಿತ ನೀರು ಸೇವನೆಯಿಂದ 54 ಜನರು ಅಸ್ವಸ್ಥರಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಇಮ್ಲಾಪುರ ಗ್ರಾಮದಲ್ಲಿ ನಡೆದಿದೆ.

ಕಲುಷಿತ ನೀರು ಸೇವನೆಯಿಂದ ಇಮ್ಲಾಪುರ ಗ್ರಾಮದ 54 ಕ್ಕೂ ಹೆಚ್ಚು ಜನರು ವಾಂತಿ-ಭೇದಿ ಯಿಂದ ಬಳಲುತ್ತಿದ್ದು, ತೀವ್ರವಾಗಿ ಅಸ್ವಸ್ಥಗೊಂಡಿರುವ 22 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಉಳಿದವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗಿದೆ.

ಇಮ್ಲಾಪುರ ಗ್ರಾಮಕ್ಕೆ ಓವರ್ ಹೆಡ್ ಟ್ಯಾಂಕ್ ಮೂಲಕ ನೀರು ಪೂರೈಸಲಾಗುತ್ತದೆ ನೀರು ಪೂರೈಕೆ ವೇಳೆ ಎರಡು ಲೀಕೇಜ್ ಪತ್ತೆಯಾಗಿದೆ. ಈ ಲೀಕೇಜ್ ನಿಂದಾಗಿಯೇ ಕುಡಿಯುವ ನೀರು ಕಲುಷಿತಗೊಂಡಿದೆ ಎಂದು ಹೇಳಲಾಗುತ್ತಿದೆ.

ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು, ಗ್ರಾಮಂಪಂಚಾಯ ಸದದ್ಯರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button