*ಮತ್ತೋರ್ವ ಗುತ್ತಿಗೆದಾರ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ; ಹಾಸನ: ಗುತ್ತಿಗೆದಾರರೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರದ ಬಳಿ ನಡೆದಿದೆ. ಕೆ.ಸತ್ತಾರ್ (79) ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ. ಹೊಳೆನರಸಿಪುರದಲ್ಲಿ ಪ್ರಥಮದರ್ಜೆ ಗುತ್ತಿಗೆದಾರರಾಗಿದ್ದರು. ಇದೀಗ ಇದ್ದಕ್ಕಿದ್ದಂತೆ ಹೇಮಾವತಿ ನದಿಗೆ ಹಾರಿ ಸಾವನ್ನಪ್ಪಿದ್ದಾರೆ. ಕೊಟ್ಟಿದ್ದ ಲಕ್ಷಾಂತರ ರೂಪಾಯಿ ಹಣ ವಾಪಸ್ ಬಂದಿಲ್ಲ ಎಂಬ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. *ಕಲುಷಿತ ನೀರಿಗೆ 6 ಜನ ಬಲಿ; ಮೃತರ ಕುಟುಂಬಕ್ಕೆ ಉದ್ಯೋಗದ ಭರವಸೆ ನೀಡಿದ ಸಿಎಂ* Home add -Advt
Copy and paste this URL into your WordPress site to embed
Copy and paste this code into your site to embed