ಬೀದರ್ ನಲ್ಲಿ ಕೊರೊನಾ ಸೋಂಕಿಗೆ ಮಹಿಳೆ ಬಲಿ; ಒಂದೇ ದಿನದಲ್ಲಿ 37 ಕೇಸ್ ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಮಹಾಮಾರಿ ಇಬ್ಬರನ್ನು ಬಲಿ ಪಡೆದುಕೊಂಡಿದೆ. ಬೆಳಿಗ್ಗೆ ಕಲಬುರಗಿಯಲ್ಲಿ ಕೊರೊನಾ ಸೋಂಕಿಗೆ ಓರ್ವ ಸಾವನ್ನಪ್ಪಿದ್ದರೆ, ಸಂಜೆ ವೇಳೆಗೆ ಬೀದರ್ ನಲ್ಲಿ ಮಹಿಳೆಯೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 37 ಕೊರೊನಾ ಪಾಸಿಟೀವ್ ಕೇಸ್ ಪತ್ತೆಯಾಗಿದೆ. ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆಯಾಗಿದೆ.

ದಾವಣಗೆರೆ ಜಿಲ್ಲೆಯಲ್ಲಿ ಕ್ಷಣ ಕ್ಷಣಕ್ಕೂ ಆತಂಕ ಹೆಚ್ಚುತ್ತಿದ್ದು, ಬೆಣ್ಣೆ ನಗರಿ ಕೊರೊನಾ ಹಾಟ್ ಸ್ಪಾಟ್ ಆಗಿ ಮಾರ್ಪಡುತ್ತಿದೆ. ಇಂದು ಒಂದೇ ದಿನದಲ್ಲಿ 22 ಜನರಲ್ಲಿ ಸೋಂಕು ದೃಢಪಟ್ಟಿದೆ. ಇನ್ನು ಬೀದರ್ ನಲ್ಲಿ 7 ಜನರಲ್ಲಿ ಸೋಂಕು ಪತ್ತೆಯಾಗಿದ್ದು 48 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ.

ಚಿಕ್ಕಬಳ್ಳಾಪುರ 1, ಬೆಂಗಳೂರು 1, ಮಂಡ್ಯ 2, ಕಲಬುರಗಿ 2, ವಿಜಯಪುರ 1, ಹಾವೇರಿಯಲ್ಲಿ 1 ಪ್ರಕರಣ ಪಾತ್ತೆಯಾಗಿದೆ. ಬೆಂಗಳೂರಿನಲ್ಲಿ 40 ವರ್ಷದ ಪೊಲೀಸ್ ಪೇದೆಯಲ್ಲಿ ಸೋಂಕು ಪತ್ತೆಯಾಗಿದೆ. ಇವರು ಬೇಗೂರು ಪೊಲೀಸ್ ಠಾಣೆ ಪೇದೆಯಾಗಿದ್ದು, ಹೊಂಗಸಂದ್ರದಲ್ಲಿ ಕರ್ತವ್ಯ ನಿರತರಾಗಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button