Kannada News

ರಾಜ್ಯದಲ್ಲಿ ಕೊರೊನಾಗೆ ಮತ್ತೊಂದು ಬಲಿ; ಬೆಳಗಾವಿ ಸೇಫ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಲಾಕ್​ಡೌನ್​ ಸಡಿಲಗೊಳಿಸಿರುವ ಬೆನ್ನಲ್ಲೇ ಕೊರೋನಾ ಸೋಂಕಿತರ ಸಂಖ್ಯೆಯೂ ಹೆಚ್ಚಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 28 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ.

ಕಲಬುರಗಿಯಲ್ಲಿ ಕೊರೋನಾ ರೋಗಿಯೊಬ್ಬ ಸಾವನ್ನಪ್ಪಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 26ಕ್ಕೆ ಏರಿಕೆಯಾಗಿದ್ದರೆ, ಸೋಂಕಿತರ ಸಂಖ್ಯೆ 642ಕ್ಕೆ ಏರಿಕೆಯಾಗಿದೆ. ಅವರಲ್ಲಿ 304 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ದಾವಣಗೆರೆಯೊಂದರಲ್ಲೇ ಇಂದು 21 ಜನರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಒಬ್ಬರಿಂದಲೇ ಈ 19 ಮಂದಿಗೆ ಸೋಂಕು ತಗುಲಿರುವುದು ಆತಂಕವನ್ನು ಹೆಚ್ಚಿಸಿದೆ.

ಇನ್ನುಳಿದಂತೆ ಮಂಡ್ಯ- 2, ಚಿಕ್ಕಬಳ್ಳಾಪುರ-1, ಹಾವೇರಿಯ ಸವಣೂರು-1, ವಿಜಯಪುರ-1, ಕಲಬುರಗಿಯಲ್ಲಿ 2 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button