ಕರ್ನಾಟಕದಲ್ಲಿ 33ಕ್ಕೆ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದಿ; ಬೆಂಗಳೂರು: ದೇಶಾದ್ಯಂತ ಹೆಚ್ಚುತ್ತಿರುವ ಕೊರೊನಾ ನಿಯಂತ್ರಣಕ್ಕೆ ವಿಮಾನಯಾನ ಸಚಿವಾಲಯ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ನಾಳೆಯಿಂದ ದೇಸಿಯ ವಿಮಾನ ಹಾರಾಟ ಕೂಡ ಸ್ಥಗಿತಗೊಳ್ಳಲಿವೆ.

ನಾಳೆ ಮಧ್ಯರಾತ್ರಿಯಿಂದ ಎಲ್ಲ ದೇಸಿಯ​ ವಿಮಾನಯಾನ ಸೇವೆಯನ್ನು ರದ್ದುಗೊಳಿಸಲಾಗಿದೆ. ವಿಶ್ವಾದ್ಯಂತ ಕೊರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಾ.31ರವರೆಗೆ ಈಗಾಗಲೇ ಅಂತಾರಾಷ್ಟ್ರೀಯ ವಿಮಾನಗಳು ಭಾರತ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದರ ಬೆನ್ನಲ್ಲೇ ನಾಳೆಯಿಂದ ಡೊಮೆಸ್ಟಿಕ್ ವಿಮಾನಯಾನ ಸೇವೆಯನ್ನು ರದ್ದು ಮಾಡಲಾಗಿದೆ.

ಈಗಾಗಲೇ ಕೊರೋನಾ ವೈರಸ್​ಗೆ ದೇಶದಲ್ಲಿ 9 ಮಂದಿ ಬಲಿಯಾಗಿದ್ದು, 415ಕ್ಕೂ ಹೆಚ್ಚು ಮಂದಿ ಸೋಂಕು ಪೀಡಿತರಾಗಿದ್ದಾರೆ. ಆರೋಗ್ಯ ಇಲಾಖೆ ಇತ್ತೀಚಿನ ಮಾಹಿತಿ ಪ್ರಕಾರ ಇಂದು ಒಂದೇ ದಿನ ಕರ್ನಾಟಕದಲ್ಲಿ 7 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button