Kannada NewsKarnataka NewsNationalPolitics
*ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಸಚಿವ ರಾಜಣ್ಣ*

ಪ್ರಗತಿವಾಹಿನಿ ಸುದ್ದಿ : ನಾನು ಮುಂದೆ ಯಾವ ಚುನಾವಣೆಯಲ್ಲೂ ಸ್ಪರ್ಧೆ ಮಾಡುವುದಿಲ್ಲ. ನನಗೆ ಡಿಸಿಎಂ ಹುದ್ದೆಯ ಮೇಲು ಯಾವುದೇ ರೀತಿಯಾದ ಆಸೆಯಿಲ್ಲ ಎನ್ನುವ ಮೂಲಕ ಕಾಂಗ್ರೆಸ್ ಶಾಸಕ ಕೆ.ಎನ್ ರಾಜಣ್ಣ ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಂದಿನ ದಿನಗಳಲ್ಲಿ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿ ರಾಜಕೀಯ ನಿವೃತ್ತಿಯ ಬಗ್ಗೆ ಸುಳಿವು ನೀಡಿದ್ದಾರೆ. ಜಾತಿ ಆಧಾರದ ಮೇಲೆ ಡಿಸಿಎಂ ಹುದ್ದೆ ನೀಡಬೇಕೆಂಬ ಕೂಗು ಕೇಳಿ ಬರುತ್ತಿರುವ ಬೆನ್ನಲ್ಲೇ ರಾಜಣ್ಣನವರ ಹೇಳಿಕೆ ಮಹತ್ವ ಪಡೆದಿದೆ




