ಕೊರೊನಾ ಸೋಂಕಿಗೆ ಮತ್ತೆ ಇಬ್ಬರು ಬಲಿ

ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈ ನಡುವೆ ಜಮ್ಮು-ಕಾಶ್ಮೀರದಲ್ಲಿ ಹಾಗೂ ಮುಂಬೈನಲ್ಲಿ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಶ್ರೀನಗರದಲ್ಲಿ 65 ವರ್ಷದ ವೃದ್ಧೆಗೆ ಕೊರೋನಾ ವೈರಸ್​ ಇರುವುದು ದೃಢಪಟ್ಟಿತ್ತು. ಇವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಸಾವನಪ್ಪಿದ್ದಾರೆ. ಈ ಮೂಲಕ ಶ್ರೀನಗರದಲ್ಲಿ ಇದೇ ಮೊದಲ ಸಾವು ಸಂಭವಿಸಿದೆ. ಇನ್ನು, ನವಿ ಮುಂಬೈನ ವ್ಯಕ್ತಿ ಕೂಡ ಕೊರೋನಾ ವೈರಸ್​ಗೆ ಬಲಿಯಾಗಿದ್ದಾನೆ.

ಭಾರತದಲ್ಲಿ ಈಗಾಗಲೇ 649 ಜನರಿಗೆ ಕೊರೋನಾ ಸೋಂಕು ತಗುಲಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗಿದೆ.

ವಿಶ್ವದಲ್ಲಿ ಒಟ್ಟು 21,363 ಜನರು ಕೊರೊನಾಗೆ ಮೃತಪಟ್ಟಿದ್ದಾರೆ. ಈ ಪೈಕಿ ಯುರೋಪ್​ ರಾಷ್ಟ್ರವೊಂದರಲ್ಲೇ 14 ಸಾವಿರಕ್ಕೂ ಅಧಿಕ ಜನರು ಅಸುನೀಗಿದ್ದಾರೆ. ಚೀನಾದಲ್ಲಿ ಸದ್ಯ, ಕೊರೋನಾ ವೈರಸ್​ ಅಟ್ಟಹಾಸ ನಿಯಂತ್ರಣಕ್ಕೆ ಬಂದಿದೆ. ಈವರೆಗೆ ಚೀನಾದಲ್ಲಿ 3,281 ಜನರು ಬಲಿಯಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button