National

*ಮದುವೆ ಮರುದಿನವೇ ನವದಂಪತಿ ಸಾವು*

ಪ್ರಗತಿವಾಹಿನಿ ಸುದ್ದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮರುದಿನವೇ ನೂತನ ದಂಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬೆಳಕಿಗೆ ಬಂದಿದೆ.

ಮಾರ್ಚ್ 7 ರಂದು ಮದುವೆ ನಡೆದಿತ್ತು. ಮಾರ್ಚ್ 8 ರಂದು ವಧು ತನ್ನ ಅತ್ತೆಯ ಮನೆಗೆ ತೆರಳಿದ್ದಳು ಮತ್ತು ಇಬ್ಬರೂ ಮದುವೆಯ ರಾತ್ರಿ ಸಾವನ್ನಪ್ಪಿದ್ದಾರೆ. ಬೆಳಗ್ಗೆ 7 ಗಂಟೆಯಾದರೂ ವಧು-ವರರು ಬಾಗಿಲು ತೆರೆಯದಿದ್ದಾಗ ಅನುಮಾನ ಬಂದು ಮನೆಯವರು ಬಾಗಿಲು ಒಡೆದಾಗ ಎಲ್ಲರೂ ಆಘಾತಕ್ಕೊಳಗಾಗಾಗಿದ್ದಾರೆ. ವಧು ಹಾಸಿಗೆಯ ಮೇಲೆ ಸತ್ತು ಬಿದ್ದಿದ್ದರೆ, ವರನು ಛಾವಣಿಯ ಕೊಕ್ಕೆಯಲ್ಲಿ ನೇತಾಡುತ್ತಿದ್ದ. ತಕ್ಷಣವೇ ಪೊಲೀಸರು ಮತ್ತು ಹುಡುಗಿಯ ಕುಟುಂಬಕ್ಕೆ ಮಾಹಿತಿ ನೀಡಲಾಯಿತು. ಮಗಳ ಸಾವಿನ ಸುದ್ದಿ ಕೇಳಿ ತಾಯಿ ತೀವ್ರ ಅಸ್ವಸ್ಥರಾಗಿದ್ದಾರೆ.

ಮಾಹಿತಿ ಬಂದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಕೂಡ ಭೇಟಿ ನೀಡಿದ್ದಾರೆ. ನವದಂಪತಿಗಳ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕವಷ್ಟೇ ಸಾವಿನ ಕಾರಣ ತಿಳಿಯಬೇಕಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button