Kannada NewsKarnataka NewsLatest

*ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆಗೆ ಯತ್ನ; ಪತ್ನಿ ಸ್ಥಳದಲ್ಲೇ ದುರ್ಮರಣ; ಪತಿ ಸ್ಥಿತಿ ಚಿಂತಾಜನಕ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಕೌಟುಂಬಿಕ ಕಲಹಕ್ಕೆ ದಂಪತಿ ಪೆಟ್ರೋಲ್ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಾರದಾ ಮೃತ ಮಹಿಳೆ. ಪತಿ ಶಂಕರಯ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪತಿ ಶಂಕರಯ್ಯ ಅಕ್ಕ-ತಂಗಿಯನ್ನೇ ವಿವಾಹವಾಗಿದ್ದ ಎನ್ನಲಾಗಿದೆ. ಶಾರದಾ ಶಂಕರಯ್ಯ ಎರಡನೇ ಪತ್ನಿ. ರಾತ್ರಿ ಕಂಠಪೂರ್ತಿ ಕುಡಿದು ಬಂದ ಶಂಕರಯ್ಯ ಪತ್ನಿ ಜೊತೆ ಜಗಳವಾಡಿದ್ದಾನೆ. ಅಲ್ಲದೇ ಪತ್ನಿ ಮೇಲೆ ಪೆಟ್ರೋಲ್ ಎರಚಿದ್ದಾನೆ. ಈ ವೇಳೆ ಕೋಪದಲ್ಲಿ ಪತ್ನಿ ಶಾರದಾ ಬೆಂಕಿಕಡ್ಡಿ ಗೀರಿದ್ದಾಳೆ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿದೆ.

Home add -Advt

ಸ್ಥಳದಲ್ಲೇ ಇದ್ದ ಶಂಕರಯ್ಯಗೂ ಬೆಂಕಿ ತಗುಲಿದೆ. ಪತ್ನಿ ಪತಿಯ ಕಣ್ಣೆದುರೇ ಸಜೀವದಹನವಾಗಿದ್ದು, ಶಂಕರಯ್ಯ ಸುಟ್ಟಗಾಯಗಳಿಂದ ಗಂಭೀರವಾಗಿದ್ದಾರೆ ಎಂದು ತಿಳಿದುಬಂದಿದೆ. ಗೌರಿಬಿದನೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button