*ಮಕ್ಕಳನ್ನು ಕೊಂದು ತಂದೆ-ತಾಯಿ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕ ತಾಲುಕಿನ ಸಿಂಗನಾಯಕನಹಳ್ಳಿಯಲ್ಲಿ ನಡೆದಿದೆ. ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಬಳಿಕ ದಂಪತಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಿನಾಶ್ (38) ಪತ್ನಿ ಮಮತಾ (30) ಮಕ್ಕಳಾದ 5 ವರ್ಷದ ಅಧೀರ್ ಹಾಗೂ 2 ವರ್ಷದ ಅನಯ ಮೃತ ದುರ್ದೈವಿಗಳು. ಕಲಬುರಗಿ ಮೂಲದ ಅವಿನಾಶ್ ಬೆಂಗಳೂರಿನಲ್ಲಿ ಏರ್ ಪೋರ್ಟ್ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸಿಂಗನಾಯಕನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ … Continue reading *ಮಕ್ಕಳನ್ನು ಕೊಂದು ತಂದೆ-ತಾಯಿ ಆತ್ಮಹತ್ಯೆಗೆ ಶರಣು*