Latest

ಕೇಂದ್ರ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಸರಸ್ವತಿ ಬಂಧನಕ್ಕೆ ಕೋರ್ಟ್ ಆದೇಶ

ಪ್ರಗತಿವಾಹಿನಿ ಸುದ್ದಿ, ಲಕ್ನೋ: ಕೇಂದ್ರದ ಬಿಜೆಪಿ ಸರಕಾರದ ಮಾಜಿ ಸಚಿವ ಚಿನ್ಮಯಾನಂದ ಸರಸ್ವತಿ ಅವರನ್ನು ಬಂಧಿಸುವಂತೆ  ಉತ್ತರ ಪ್ರದೇಶದ ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿದೆ.

ಸ್ವಾಮಿ ಚಿನ್ಮಯಾನಂದ ಸರಸ್ವತಿ ವಿರುದ್ಧ ಲೈಂಗಿಕ ದೌರ್ಜನ್ಯದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸುವಂತೆ ಉತ್ತರ ಪ್ರದೇಶದ ಶಹಜಹಾನ್‌ಪುರದ ವಿಶೇಷ ಸಂಸದ-ಶಾಸಕ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ.

ಡಿಸೆಂಬರ್ 9 ರಂದು ಸ್ವಾಮಿ ಚಿನ್ಮಯಾನಂದ ಅವರನ್ನು ನ್ಯಾಯಾಲಯದ ಎದುರು  ಹಾಜರುಪಡಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

ಚಿನ್ಮಯಾನಂದರ ಮೇಲೆ ಅವರ ಶಿಷ್ಯರೊಬ್ಬರು 2011 ರಲ್ಲಿ ಲೈಂಗಿಕ ಶೋಷಣೆಯ ಆರೋಪದ ನಂತರ ಪ್ರಕರಣ ದಾಖಲಿಸಿದ್ದರು. ಆದರೆ ಈ ಪ್ರಕರಣದಲ್ಲಿ ಸೂಕ್ತ ತನಿಖೆ ನಡೆಯದೆ ವಿಳಂಬವಾಗಿತ್ತು. ಇದೀಗ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಅವರ ಬಂಧನಕ್ಕೆ ಆದೇಶಿಸಿದೆ.

Home add -Advt

 

ನಾಯಿಗಳ ಮೇಲೆ ರಾಸಾಯನಿಕ ಅಸ್ತ್ರ ಪ್ರಯೋಗ ಮಾಡುತ್ತಿದ್ದ ಒಸಾಮಾ ಬಿಲ್ ಲಾಡೆನ್

Related Articles

Back to top button