ಕೋರ್ಟ್ ಗೆ ಹಾಜರಾಗದೇ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ: ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೇ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಧಾರವಾದ ಪಾಲಿಕೆ ಮಾಜಿ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀಕಾಂತ್ ಜಮನಾಳ ಬಂಧಿತ ಆರೋಪಿ. ಧಾರವಾಡ ಉಪನಗರ ಠಾಣೆ ಪೊಲೀಸರು ಶ್ರೀಕಾಂತ್ ನನ್ನು ಬಂಧಿಸಿದ್ದಾರೆ. ಈತ ಸಿಜೆ ಹಾಗೂ ಜೆ ಎಂ ಎಫ್ ಸಿ ನ್ಯಾಯಾಲಯದಿಂದ ಶಿಕ್ಷಕೆಗೆ ಗುರಿಯಾಗಿ ಜಾಮೀನು ಪಡೆದುಕೊಂಡಿದ್ದ. ಬಳಿಕ ಕೋರ್ಟ್ ಗೆ ಹಾಜರಾಗದೇ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈ ಹಿಂದೆ ಜೆಡಿಎಸ್ ನಲ್ಲಿ ಗುರುತಿಸಿಕೊಂಡು ಮಹಾನಗರ ಪಾಲಿಕೆ ಸದಸ್ಯನಾಗಿದ್ದ. ಸದ್ಯ ಶೀಕಾಂತ್ … Continue reading ಕೋರ್ಟ್ ಗೆ ಹಾಜರಾಗದೇ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್