ರಾಷ್ಟ್ರಪತಿ ಭವನಕ್ಕೂ ಹರಡಿದ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೊಂಕು ಹೆಚ್ಚುತ್ತಿದ್ದು, ಈ ವರೆಗೆ 590 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ನಡುವೆ ರಾಷ್ಟ್ರಪತಿ ಭವನಕ್ಕೂ ಕೊರೊನಾ ಭೀತಿ ಎದುರಾಗಿದ್ದು, ರಾಷ್ಟ್ರಪತಿ ಭವನದ ಓರ್ವ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಕಟ್ಟುನಿಟ್ಟಾಗಿ ಲಾಕ್​ಡೌನ್​ ಜಾರಿ ಮಾಡಿದರೂ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ರಾಷ್ಟ್ರಪತಿ ಭವನದ ಕೆಲಸ ಮಾಡುವ ಓರ್ವ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ 125 ಕುಟುಂಬಗಳನ್ನು ಹೋಮ್​ ಕ್ವಾರಂಟೈನ್​ನಲ್ಲಿರಲು ಸೂಚಿಸಲಾಗಿದೆ.

ರಾಷ್ಟ್ರಪತಿ ಭವನದ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ. ಹೀಗಾಗಿ, ಕೇಂದ್ರ ಗೃಹ ಸಚಿವಾಲಯದ ಮಾರ್ಗಸೂಚಿಯಂತೆ ಮುನ್ನೆಚ್ಚರಿಕಾ ಕ್ರಮವಾಗಿ ಆ ಸಿಬ್ಬಂದಿಯ ಜೊತೆ ಸಂಪರ್ಕ ಹೊಂದಿದ್ದ 125 ಕುಟುಂಬಗಳಿಗೆ ಹೋಂ ಕ್ವಾರಂಟೈನ್​ ವಿಧಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button