Latest

ವಿದ್ಯಾರ್ಥಿಗಳ ಪರೀಕ್ಷೆ: ಗೊಂದಲಕ್ಕೆ ತೆರೆ ಎಳೆದ ಸುರೇಶ ಕುಮಾರ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕಳೆದ ಹಲವು ದಿನಗಳಿಂದ ಇದ್ದ ವಿದ್ಯಾರ್ಥಿಗಳ ಪರೀಕ್ಷೆ ಗೊಂದಲಕ್ಕೆ ಶಿಕ್ಷಣ ಸಚಿವ ಸುರೇಶ ಕುಮಾರ ತೆರೆ ಎಳೆದಿದ್ದಾರೆ.

ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1 ರಿಂದ 9ನೇ ತರಗತಿವರೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದಿದ್ದಾರೆ. ಹಾಗೆಯೇ 11ನೇ ತರಗತಿಗೆ ಕೂಡ ಈ ಬಾರಿ ಪರೀಕ್ಷೆ ಇಲ್ಲ. ಇವರೆಲ್ಲ ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ಅರ್ಹರಾಗುತ್ತಾರೆ.

ಆದರೆ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದ್ದು, ಶೀಘ್ರದಲ್ಲಿ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಏಪ್ರಿಲ್ 14ರಂದು ಲಾಕ್ ಡೌನ್ ಮುಗಿಯುತ್ತಿದ್ದಂತೆ ಎಸ್ಎಸ್ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ಸುರೇಶ ಕುಮಾರ ತಿಳಿಸಿದ್ದಾರೆ.

Home add -Advt

Related Articles

Back to top button