Karnataka News
*ಕೋವಿಡ್ ಹಗರಣ ತನಿಖೆ CIDಗೆ ವಹಿಸಿದ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಕೋವಿಡ್ ಹಗರಣ ಸಂಬಂಧ ವಿಶೇಷ ತನಿಖಾ ತಂಡ ರಚಿಸಲು ಮುಂದಾಗಿದ್ದ ರಾಜ್ಯ ಸರ್ಕಾರ ಇದೀಗ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.
ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿ ಎರಡು ತಿಂಗಳ ಬಳಿಕ ರಾಜ್ಯ ಸರ್ಕಾರ ಕೋವಿಡ್ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದೆ.
ಸಿಐಡಿ ಎಸ್ ಪಿ ರಾಘವೇಂದ್ರ ಹೆಗಡೆ, ಮೂವರು ಡಿವೈ ಎಸ್ ಪಿ ಗಳನ್ನು ಒಳಗೊಂಡ ತಂಡ ಹಗರಣದ ತನಿಖೆ ನಡೆಸಲಿದೆ.


