Uncategorized

*ಗೋಹತ್ಯೆ ನಿಷೇಧ ಕಾಯ್ದೆ ರದ್ದು ವಿಚಾರ; ಸ್ಪಷ್ಟನೆ ನೀಡಿದ ಸಚಿವರು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯುತ್ತೇವೆ ಎಂದು ನಾವು ಹೇಳಿಲ್ಲ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ರದ್ದು ವಿಚಾರ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಸಚಿವ ಕೆ.ವೆಂಕಟೇಶ್, ಗೋಹತ್ಯೆ ನಿಷೇಧ ಕಾಯ್ದೆ ವಿಚಾರದ ಬಗ್ಗೆ ಪಕ್ಷದ ಒಳಗಡೆ ಚರ್ಚೆ ನಡೆಯುತ್ತಿದೆ. ಕಾಯ್ದೆ ಹಿಂಪಡೆಯುತ್ತೇವೆ ಎಂದು ನಾವು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ವೇಳೆ ಸಭಾಪತಿ ಹೊರಟ್ಟಿ, ಗೋಹತ್ಯೆ ಬಗ್ಗೆ ದಾಖಲೆಗಳಿದ್ದರೆ ನೀಡಲಿ. ಪರಿಶೀಲಿಸಿ ಚರ್ಚೆಗೆ ಅವಕಾಶ ನೀಡಲಾಗುವುದು ಎಂದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಪ್ರತಿಭಟನೆ ಹಿಂಪಡೆದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button