Kannada NewsKarnataka News

*1 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾ ಬಲೆಗೆ ಬಿದ್ದ ಸಿಪಿಐ, ಪಿಎಸ್ಐ*

ಪ್ರಗತಿವಾಹಿನಿ ಸುದ್ದಿ: ದೂರುದಾರನಿಂದ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಸಿಪಿಐ, ಪಿಎಸ್‌ಐ ಸೇರಿ ಮೂವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.‌

ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣೆ ಇನ್ಸೆಕ್ಟರ್ ರಾಜಶೇಖರ್(48), ಪಿಎಸ್‌ಐ ರುಮಾನ್ ಪಾಷಾ(32) ಹಾಗೂ ಖಾಸಗಿ ವ್ಯಕ್ತಿ ಡಿಜೆ ಹಳ್ಳಿಯ ಇಮ್ರಾನ್ ಬಾಬು(32) ಬಂಧಿತ ಆರೋಪಿಗಳು ಎಂದು ಗೊತ್ತಾಗಿದೆ.

Home add -Advt

ಕೆಆರ್ ಪುರ ನಿವಾಸಿ ಮಂಜುನಾಥ್ ಎಂಬವರು ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಲಂಚ ಸಹಿತ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣವೊಂದರ ಸಂಬಂಧ ಇನ್ಸೆಕ್ಟರ್ ರಾಜಶೇಖರ್ ಮತ್ತು ಪಿಎಸ್‌ಐ ರುಮಾನ್ ಪಾಷಾ ಹಾಗೂ ಇಮ್ರಾನ್ ಬಾಬು ದೂರುದಾರರ ಬಳಿ ಎರಡು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಶನಿವಾರ ಸಂಜೆ ದೂರುದಾರನಿಂದ ಒಂದು ಲಕ್ಷ ರೂ. ಸ್ವೀಕರಿಸುವಾಗ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

Related Articles

Back to top button