Latest

ಬೃಹತ್ ಕ್ರೇನ್ ಬಿದ್ದು 11 ಜನ ಸಾವು

ಪ್ರಗತಿವಾಹಿನಿ ಸುದ್ದಿ; ವಿಶಾಖಪಟ್ಟಣಂ: ಬೃಹತ್ ಕ್ರೇನ್​ ಕುಸಿದುಬಿದ್ದು 11 ಮಂದಿ ಸಾವನ್ನಪ್ಪಿರುವ ದುರಂತ ಘಟನೆ ಆಂಧ್ರದ ವಿಶಾಖಪಟ್ಟಣಂನಲ್ಲಿರುವ ಹಿಂದೂಸ್ತಾನ್ ಶಿಪ್​ಯಾರ್ಡ್ ಬಳಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ.

ವಿಶಾಖಪಟ್ಟಣಂನ ಬಂದರಿನಲ್ಲಿರುವ ಹಿಂದೂಸ್ಥಾನ್ ಶಿಪ್​ಯಾರ್ಡ್ ಸಂಸ್ಥೆಯ ಹಡಗುದಾಣದಲ್ಲಿ ನೂತನ ಕ್ರೇನ್ ಸ್ಥಾಪಿಸುವ ವೇಳೆ ಈ ಘಟನೆ ಸಂಭವಿಸಿದ್ದು, ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಗಳಲ್ಲಿ ನಿರತರಾಗಿದ್ದಾರೆ.

Home add -Advt

ನಾಲ್ಕು ಮೃತ ದೇಹಗಳನ್ನ ಸದ್ಯ ಹೊರತೆಗೆಯಲಾಗಿದೆ. ಇನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಮೃತಪಟ್ಟವರಲ್ಲಿ ನಾಲ್ವರು ಹಿಂದೂಸ್ಥಾನ್ ಶಿಪ್​ಯಾರ್ಡ್ ಸಂಸ್ಥೆಯ ಉದ್ಯೋಗಿಗಳಾಗಿದ್ದರೆ, ಇನ್ನುಳಿದವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾಗಿದ್ದಾರೆ. ಅನುಪಮ್ ಹೆಸರಿನ ಈ ಕ್ರೇನ್ ಬರೋಬ್ಬರಿ 70 ಟನ್ ತೂಕ ಇದೆ.

Related Articles

Back to top button