Belagavi NewsBelgaum NewsKannada NewsKarnataka News

*ಮರ್ಡರ್ ಮಾಡಿ ಕಾರಿನಲ್ಲಿ ಶವ ಬಿಟ್ಟು ಪರಾರಿಯಾದ ದುಷ್ಕರ್ಮಿಗಳು* 

ಪ್ರಗತಿವಾಹಿನಿ ಸುದ್ದಿ: ವಿಜಯಪುರ ನಗರದಲ್ಲಿ ಅಥಣಿ ಮೂಲದ ವ್ಯಕ್ತಿಯನ್ನು ಹತ್ಯೆ ಮಾಡಿ, ಕಾರಿನಲ್ಲಿ ಶವ ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.‌

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೋಹಳ್ಳಿ ಗ್ರಾಮದ ಸಂಗಪ್ಪ ರಾಮು ದೇವಕತೆ (58) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.‌ ಈತನನನ್ನು ಎಲ್ಲಿಯೋ ಹತ್ಯೆ ಮಾಡಿ, ಮಹಾರಾಷ್ಟ್ರ ಪಾಸಿಂಗ್ ಹೊಂದಿರುವ ಕಾರಿನ ಸಮೇತ ಶವವನ್ನು ವಿಜಯಪುರ ನಗರದ ಜಿಲ್ಲಾಸ್ಪತ್ರೆ ಆವರಣಕ್ಕೆ ತಂದು, ದುಷ್ಕರ್ಮಿಗಳು ಓಡಿ ಹೋಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ವಿಜಯಪುರ ನಗರದ ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button