Latest

ಮಹೇಶ್ ಕುಮಾರ್‌ಗೆ ರಾಷ್ಟ್ರಪತಿ ಪುರಸ್ಕಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರಕು ಮತ್ತು ಸೇವಾ ತೆರಿಗೆ ವಂಚಕರನ್ನು ಪತ್ತೆಹಚ್ಚಿ, ವಂಚಿಸಿದ ತೆರಿಗೆಯನ್ನು ವಸೂಲಿ ಮಾಡುವಲ್ಲಿ ಮಹತ್ವದ ಸಾಧನೆ ತೋರಿದ ಕನ್ನಡಿಗ ಅಧಿಕಾರಿ ಮಹೇಶ್ ಕುಮಾರ್ ಅವರಿಗೆ 2021ನೇ ಸಾಲಿನ ರಾಷ್ಟ್ರಪತಿ ಪುರಸ್ಕಾರ ದೊರೆತಿದೆ.

ಬೆಂಗಳೂರು ದಕ್ಷಿಣ ಕೇಂದ್ರೀಯ ತೆರಿಗೆ ಕಮಿಷನರೇಟ್‍ನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‍ಟಿ) ವಿಭಾಗದ ಅಧೀಕ್ಷಕರಾಗಿರುವ ಮಹೇಶ್ ಕುಮಾರ್ ಅವರಿಗೆ ಬೆಂಗಳೂರಿನಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.

Home add -Advt

ಮಹೇಶ್ ಕುಮಾರ್ ಅವರು ₹1,380 ಕೋಟಿ ತೆರಿಗೆ ವಂಚನೆಯ 153 ಪ್ರಕರಣಗಳಲ್ಲಿ ₹482 ಕೋಟಿ ವಸೂಲು ಮಾಡಿದ ಸಾಧನೆಗಾಗಿ ಈ ಪುರಸ್ಕಾರ ದೊರೆತಿದೆ.

ದೇಶ ಸೇವೆಯ ಹೆಮ್ಮೆ: “ತೆರಿಗೆ ವಂಚಕರನ್ನು ಪತ್ತೆ ಹಚ್ಚಿ, ವಂಚಿಸಿದ ತೆರಿಗೆಯನ್ನು ದೇಶಕ್ಕೆ ಕೊಡಿಸುವ ಕೆಲಸ ನಿಜವಾದ ದೇಶ ಸೇವೆಗಳಲ್ಲಿ ಒಂದು ಎಂದು ಭಾವಿಸಿದ್ದೇನೆ. ಯಾರ ಹಸ್ತಕ್ಷೇಪವೂ ಇಲ್ಲದೆ, ಯಾರ ಮುಲಾಜಿಗೂ ಒಳಗಾಗದೆ ಕರ್ತವ್ಯ ನಿರ್ವಹಿಸಲು ಅವಕಾಶ ಇರುವುದು ಹೆಮ್ಮೆಯ ಸಂಗತಿ. ಹೀಗಾಗಿಯೇ ಇಂತಹ ಸಾಧನೆ ಮಾಡುವುದು ಸಾಧ್ಯವಾಯಿತು’ ಎಂದು ಮಹೇಶ್ ಕುಮಾರ್ ತಮ್ಮ ಅನುಭವ ಹಂಚಿಕೊಂಡರು.

ಬೆಳ್ಳಿ ದರದಲ್ಲಿ ಕುಸಿತ; ಹಾಗಾದರೆ ಇಂದು ಚಿನ್ನದ ದರ ಎಷ್ಟಿದೆ?

Related Articles

Back to top button