Kannada NewsKarnataka News
ಸೈಕಲ್ ರ್ಯಾಲಿಗೆ ಕಿತ್ತೂರಿನಲ್ಲಿ ಚಾಲನೆ

ಪ್ರಗತಿವಾಹಿನಿ ಸುದ್ದಿ, ಕಿತ್ತೂರು – ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬೆಳಗಾವಿ ಜಿಲ್ಲೆ ಚೆನ್ನಮ್ಮನ ಕಿತ್ತೂರಿನಿಂದ ಸಂಗೊಳ್ಳಿ ರಾಯಣ್ಣನ ಸ್ಮಾರಕವಿರುವ ಖಾನಾಪುರ ತಾಲ್ಲೂಕಿನ ನಂದಗಡದವರೆಗೆ ಆಯೋಜಿಸಲಾಗಿರುವ 75 ಸೈಕ್ಲಿಸ್ಟ್ ಗಳ ಸೈಕಲ್ ರ್ಯಾಲಿಗೆ ಶಾಸಕ ಮಹಾಂತೇಶ ದೊಡ್ಡಗೌಡ್ರ ಹಾಗೂ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಶುಕ್ರವಾರ (ಮಾ.12) ಬೆಳಿಗ್ಗೆ ಕಿತ್ತೂರಿನ ಚನ್ನಮ್ಮನ ವೃತ್ತದಲ್ಲಿ ಚಾಲನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ ಮತ್ತಿತರರು ಉಪಸ್ಥಿತರಿದ್ದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ – ನೇರ ಪ್ರಸಾರ
ಕಿತ್ತೂರಿನಲ್ಲಿ ಸ್ವಾತಂತ್ರೋತ್ರ್ಯದ ಅಮೃತ ಮಹೋತ್ಸವ : ಪ್ರಧಾನಿ ಮೋದಿಯಿಂದ ಉದ್ಘಾಟನೆ




