Latest

*ಸಿಲಿಂಡರ್ ಸ್ಫೋಟ: 6 ಜನರಿಗೆ ಗಂಭೀರ ಗಾಯ; ಓರ್ವನ ಸ್ಥಿತಿ ಚಿಂತಾಜನಕ*

ಪ್ರಗತಿವಾಹಿನಿ ಸುದ್ದಿ: ಅಡುಗೆ ಸಿಲಿಂಡರ್ ಸ್ಫೊಟಗೊಂಡು 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ನಡೆದಿದೆ.

ಮುನೀರ್ ಸಾಬ್ (65), ಫರೀದಾ ಬಾನು(58), ಸುಲ್ತಾನ್ (18), ಅಲ್ತಾಫ್ (15), ತಮನ್ನಾ(14), ಶಬೀನಾ ಬಾನು (34)ಗಾಯಾಳುಗಳು. ಗಾಯಾಳುಗಳಲ್ಲಿ ಮುನೀರ್ ಸಾಬ್ ಸ್ಥಿತಿ ಗಂಭೀರವಾಗಿದೆ.

Home add -Advt

ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ರಭಸಕ್ಕೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿವೆ.

ದಾವಣಗೆರೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Articles

Back to top button