Karnataka News

*ಸಿಲಿಂಡರ್ ಸ್ಫೋಟ: ತಾಯಿ-ಮೂವರು ಮಕ್ಕಳ ಸ್ಥಿತಿ ಗಂಭಿರ*

ಪ್ರಗತಿವಾಹಿನಿ ಸುದ್ದಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ ಹಾಗು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಮಂಜನವಡಿಯಲ್ಲಿ ನಡೆದಿದೆ.

ಘಟನೆಯಿಂದ ತಾಯಿ ಹಾಗು ಮೂವರು ಮಕ್ಕಳು ಮಲಗಿದ್ದ ಮಂಚ ಬೆಂಕಿಗಾಹುತಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ. ಗೋಡೆಗಳಿಗೆ ಹಾನಿಯಾಗಿವೆ. ಗ್ಯಾಸ್ ಪೈಪ್ ಲೈನ್ ನಲ್ಲಿ ದೋಷ ಅಥವಾ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪುಟ್ಟರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button