Kannada NewsKarnataka NewsPolitics

*ಶಾಸಕ ಯತ್ನಾಳ್ ಹಾಗೂ ಬೆಂಬಲಿಗರನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಹೊಸ ನಿಲುವನ್ನು ವಿರೋಧಿಸಿ ಧರಣಿ ನಡೆಸುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಜಯಪುರದಲ್ಲಿ ಪ್ರಮುಖ ಶಿಕ್ಷಣ ಸಂಸ್ಥೆಯೊಂದರ ಆವರಣದಲ್ಲಿ ಶಾಸಕ ಯತ್ನಾಳ್ ಮತ್ತು ಬೆಂಬಲಿಗರು ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ವಿತರಿಸಲು ಮುಂದಾದಾಗ, ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ನಡೆದ ತೀವ್ರ ವಾಗ್ವಾದ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಿಸಿತು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ಗುಂಪನ್ನು ಚದುರಿಸಲು ಪೊಲೀಸ್ ಅಧಿಕಾರಿಗಳು ಹೆಚ್ಚುವರಿ ಪಡೆಗಳನ್ನು ನಿಯೋಜಿಸಬೇಕಾಯಿತು.

Related Articles
Home add -Advt

ಈ ಹಿಂದೆ ಜಾರಿಯಲ್ಲಿದ್ದ ವಸ್ತಸಂಹಿತೆಯ ನಿಯಮಾವಳಿಗಳನ್ನು ಇತ್ತೀಚೆಗೆ ಪರಿಷ್ಕರಿಸಿರುವ ಸರ್ಕಾರ, ಕೆಲವು ಧಾರ್ಮಿಕ ಮತ್ತು ಸಾಂಪ್ರದಾಯಿಕ ಸಂಕೇತಗಳ ಧರಿಸುವಿಕೆಗೆ ಮುಕ್ತ ಅವಕಾಶ ಕಲ್ಪಿಸಿದೆ. ಈ ತಾರತಮ್ಯದ ಧೋರಣೆಯನ್ನು ಖಂಡಿಸಿ ಹಮ್ಮಿಕೊಳ್ಳಲಾಗಿದ್ದ ಈ ಸಾಂಕೇತಿಕ ಹೋರಾಟ ಸದ್ಯ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ಸದ್ದಿಗೆ ಕಾರಣವಾಗಿದೆ. 

Related Articles

Back to top button