Kannada NewsKarnataka NewsNational

*ರಬ್ಬರ್ ಕಾರ್ಖಾನೆಯಲ್ಲಿ ಸಿಲಿಂಡರ್ ಸ್ಪೋಟ್: 40ಕ್ಕೂ ಹೆಚ್ಚು ಕಾರ್ಮಿಕರ ಸಾವು*

ಪ್ರಗತಿವಾಹಿನಿ ಸುದ್ದಿ: ಚಂಡಿಗಢದ ಸೋನಿಪತ್ ಜಿಲ್ಲೆಯ ರಾಯ್ ಕೈಗಾರಿಕಾ ಪ್ರದೇಶದ ರಬ್ಬ‌ರ್ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, 40ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ.

ಅಗ್ನಿ ಅವಘಡದ ಸಂದರ್ಭದಲ್ಲಿ ಕಾರ್ಖಾನೆಯಲ್ಲಿ ಸಿಲುಕಿದ್ದ ನೌಕರರನ್ನು ರಕ್ಷಿಸಲಾಗಿದೆ. ಈ ಘಟನೆ ನಡೆದ ಕೂಡಲೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಕಾರ್ಖಾನೆಯಲ್ಲಿ ರಬ್ಬರ್ ಇದ್ದ ಕಾರಣ ಬೆಂಕಿ ವೇಗವಾಗಿ ವ್ಯಾಪಿಸಿದೆ. 16 ಮಂದಿ ಕಾರ್ಮಿಕರು ಸಿವಿಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದರಲ್ಲಿ 8 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗೆ ಉನ್ನತ ಮಟ್ಟದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇನ್ನೂ ಕೆಲವರು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button