Belagavi NewsBelgaum NewsKannada NewsKarnataka News

*ಕಿಡಿಗೇಡಿಗಳಿಂದ ತಲ್ವಾರ್ ದಾಳಿ: ಬಾಲಕನಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮೊಹರಂ ಮೆರವಣಿಗೆ ಮುಗಿದ ಮೇಲೆ ಕಿಡಿಗೇಡಿಗಳು ತಲ್ವಾರ್ ನಿಂದ ಮಾರಣಾಂತಿಕ ದಾಳಿ ನಡೆಸಿದ್ದು, ಈ ಘಟನೆಯಲ್ಲಿ ಓರ್ವ ಬಾಲಕನಿಗೆ ಗಂಭೀರ ಗಾಯಗಳಾಗಿವೆ. 

ಈ ಘಟನೆ ಬೆಳಗಾವಿ ನಗರದ ಕಸಾಯಿ ಗಲ್ಲಿಯಲ್ಲಿ ನಡೆದಿದೆ. ಘಟನೆಯಲ್ಲಿ ರೆಹಾನ್ ಅಸ್ಲಮ್ ಮುಜಾವರ್ (16) ಎಂಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.

Home add -Advt

ಇನ್ನು ಘಟನೆ ನಡೆಯುತ್ತಿದ್ದಂತೆ ಪೊಲೀಸ್‌ ಆಯುಕ್ತ ಭೂಷಣ ಗುಲಾಬರಾವ್ ಬೋರಸೆ ಮತ್ತು ಡಿಸಿಪಿ ನಾರಾಯಣ ಬರಮನಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಈ ಘಟನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

Related Articles

Back to top button